
ಹೊಸನಗರ: ಪಟ್ಟಣ ಸಮೀಪ ಕಲ್ಲುಹಳ್ಳ ಬಳಿ ಬೈಂದೂರು ರಾಣಿಬೆನ್ನೂರು ರಾಷ್ಟ್ರೀಯ ಹೆದ್ದಾರಿ 766ಸಿ ಯಲ್ಲಿ ಚಲಿಸುತ್ತಿದ್ದ ಕಾರಿಗೆ ಜಿಂಕೆಯೊಂದು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.
ಹೊಸನಗರದಿಂದ ಹೋಗುತ್ತಿದ್ದ ಕಾರಿಗೆ ರಸ್ತೆ ಪಕ್ಕದಿಂದ ರಭಸದಲ್ಲಿ ಓಡಿ ಬಂದ ಜಿಂಕೆ ಡಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಸಾವು ಕಂಡಿದೆ.
ಸ್ಥಳಕ್ಕೆ ನಗರ ವಲಯ ಅರಣ್ಯಾಧಿಕಾರಿ ಸಂತೋಷ ಮಲ್ಲನಗೌಡ, ಡಿವೈಆರ್ ಎಫ್ ಒ ನರೇಂದ್ರ ಮತ್ತು ಸಿಬ್ಬಂದಿ ಬೇಟಿ ನೀಡಿ ಮಹಜರು ಮಾಡಿದರು.
DEER ACCIDENT..
