ACCUSED ARRESTED: ಹೊಸನಗರ: 39 ಕೆ.ಜಿ ಶ್ರೀಗಂಧ ವಶ ಓರ್ವನ ಬಂಧನ…

ಹೊಸನಗರ : ಹೊಸನಗರ ವಲಯದ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶ್ರೀಗಂಧಮರ ಮರಗಳನ್ನು ಕಡಿದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನೊಬ್ಬ  ಆರೋಪಿ ತಪ್ಪಿಸಿಕೊಂಡಿದ್ದಾನೆ. ಇಂದು ಅರಣ್ಯ ಸಂಚಾರಿ ದಳದ ಪೊಲೀಸರು ನಿಖರ ಮಾಹಿತಿ ಮೇರೆಗೆ ಹೊಸನಗರ ವಲಯದ ವ್ಯಾಪ್ತಿಯಲ್ಲಿ  ಕಾರ್ಯಾಚರಣೆ ನಡೆಸಿ ಕಳ್ಳರಿಂದ 39.300 ಕೆ.ಜಿ. ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ  ದಯಾಕುಮಾರ ಅಲಿಯಾಸ್  ದಯಾನಂದ್ ಎಂಬಾತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಕೌಶಿಕ್ ಎಂಬಾತನು ತಪ್ಪಿಸಿಕೊಂಡಿದ್ದಾನೆ. ಆತನ ಪತ್ತೆಗೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.ಕಾರ್ಯಾಚರಣೆಯಲ್ಲಿ ಪೊಲೀಸ್ ಅರಣ್ಯ ಸಂಚಾರಿದಳದ ಪಿಎಸ್‌ಐ ವಿನಾಯಕ ಕೆ ಮತ್ತು ಸಿಬ್ಬಂದಿ ಹಾಗೂ ಹೊಸನಗರ ವಲಯದ ವಲಯ ಅರಣ್ಯಾಧಿಕಾರಿಗಳಾದ. ಅನಿಲ್ ಕುಮಾರ್ ಎಸ್. ಮಂಜುನಾಥ, ಉಪ ವಲಯ ಅರಣ್ಯಾಧಿಕಾರಿ, ಶ್ರೀ ಭರತ್ ಕುಮಾರ್ ಗಸ್ತು ಅರಣ್ಯ ಪಾಲಕ ಹಾಗೂ ಸಿಬ್ಬಂದಿಯವರು ಭಾಗಿಯಾಗಿದ್ದರು...

ACCUSED ARRESTED...


Discover more from Prasarana news

Subscribe to get the latest posts sent to your email.

  • Related Posts

    PERVERSION:ಇದೆಂತಾವಿಕೃತಿ… ಹಸುಗಳ ಕೆಚ್ಚಲು ಕೊಯ್ದ ದುರುಳರು. ಹೊಸನಗರದಲ್ಲೊಂದು ಅಮಾನವೀಯ ಘಟನೆ….

    ಹೊಸನಗರ ; ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಹೊಸನಗರ ತಾಲೂಕಿನ ತೋಟದಕೊಪ್ಪ ಗ್ರಾಮದ ವಿಜಾಪುರ ಎಂಬಲ್ಲಿ ಶನಿವಾರ ನಡೆದಿದೆ.ಗ್ರಾಮದ ನವೀನ್ ಎಂಬುವರು ತಾವು ಸಾಕಿದ ಗೋವನ್ನ ಮೇಯಲು ಬಿಟ್ಟಿದ್ದು ಶನಿವಾರ ಸಂಜೆ 4:30ರ ಸುಮಾರಿಗೆ ಊರಿನ ಜನರು ಫೋನ್…

    Read more

    DIESEL THIEVES:                ಕಳ್ಳರ ಕರಾಮತ್ತು: ಮೆಸ್ಕಾಂ ಕಚೇರಿ ಮುಂಭಾಗ ನಿಲ್ಲಿಸಿದ್ದ ಮೆಸ್ಕಾಂ ಲಾರಿಯಿಂದ 135 ಲೀಟರ್ ಡೀಸೆಲ್ ಕಳವು…

    ಹೊಸನಗರ: ಮೆಸ್ಕಾಂ ಇಲಾಖೆ ಹೊಸನಗರದ ಕಚೇರಿ ಮುಂಭಾಗ ನಿಲ್ಲಿಸಿದ್ದ ಮೆಸ್ಕಾಂ ಲಾರಿಯಿಂದ 135 ಲೀಟರ್ ಡೀಸೆಲ್ ಕಳವು ಮಾಡಿದ ಘಟನೆ ನಡೆದಿದೆ. ಮೆಸ್ಕಾಂ ಹೊಸನಗರ ಉಪವಿಭಾಗದ ದಿನದ ಕೆಲಸ ಮುಗಿಸಿ ಕಚೇರಿ ಎದುರು ಲಾರಿ‌ ನಿಲ್ಲಿಸಿದ್ದ ವೇಳೆ ಬರೋಬ್ಬರಿ 135 ಲೀ…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading