BOOTH LEVEL OFFICER: ಬಿ,ಎಲ್‌,ಒ ಕೆಲಸದಿಂದ ಶಿಕ್ಷಕರನ್ನು ಕೈಬಿಡಬೇಕು: ಎಸ್ ಡಿ ಎಂ ಸಿ ಅಧ್ಯಕ್ಷ ರಮೇಶ್ ನೇರಲೆ ಆಗ್ರಹ..

ಹೊಸನಗರ:ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸದಿಂದ ಶಿಕ್ಷಕರನ್ನು ಕೂಡಲೇ ಕೈಬಿಡಬೇಕು ಎಂದು ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ರಮೇಶ್ ನೇರಲೆ ಆಗ್ರಹಿಸಿದ್ದಾರೆ. ಈ ಕುರಿತಾಗಿ ಮಾತಾನಾಡಿದ ಅವರು ಇದುವರೆಗೆ ಬಿ ಎಲ್ ಒ ಕೆಲಸಕ್ಕೆ ಅಂಗನವಾಡಿ ಶಿಕ್ಷಕಿಯರು ಹಾಗೂ ಗ್ರಾಮ ಪಂಚಾಯಿತಿಯ ನೌಕರು ಹಾಗೂ ಕೆಲವೊಂದು ಶಾಲೆಗಳಲ್ಲಿ ಶಿಕ್ಷಕರನ್ನು ಬಿ ಎಲ್ ಒ ಕೆಲಸಕ್ಕೆ ನೇಮಕ ಮಾಡುತ್ತಿದ್ದರು ಆದರೆ ಇದೀಗ ಮಾನ್ಯ ಡಿಸಿ ಅವರ ಆದೇಶದಂತೆ ಸರ್ಕಾರಿ ಶಾಲೆಯ ಶಿಕ್ಷಕರನ್ನು ಮಾತ್ರ ಬಿ ಎಲ್ ಒ ಕೆಲಸಕ್ಕೆ ನೇಮಿಸಿರುತ್ತಾರೆ. ಮಾನ್ಯ ಶಿಕ್ಷಣ ಸಚಿವರು ಬಿ ಎಲ್ ಒ ಕೆಲಸಕ್ಕೆ ಶಿಕ್ಷಕರನ್ನು ನೇಮಿಸುವುದಿಲ್ಲ ಎಂದು ಈಗಾಗಲೇ ತಿಳಿಸಿದರು ಸಹ ಶಿಕ್ಷಕರನ್ನು ಬಿ ಎಲ್ ಒ ಕೆಲಸಕ್ಕೆ ನಿಯೋಜಿಸಿರುವುದು ಸರಿಯಲ್ಲ
ಶಾಲೆಯಲ್ಲಿ ಮಕ್ಕಳ ದಾಖಲಾತಿ, ಕ್ರೀಡಾಕೂಟ, ಪ್ರತಿಭಾ ಕಾರಂಜಿ ಸೇರಿದಂತೆ ಇಲಾಖೆಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದು ಮತ್ತು ನಿರ್ವಹಣೆ ಮಾಡುವುದು ಕಷ್ಟವಾಗಿದೆ. ಒಂದು ತಿಂಗಳ ಕಾಲ ಮತದಾರರ ಪಟ್ಟಿ ತಯಾರಿಕೆ, ಮತ್ತು ಮನೆ ಮನೆಗೆ ಬೇಟಿ ಕರ್ತವ್ಯದಲ್ಲಿ ಶಿಕ್ಷಕರು ತೊಡಗಿಕೊಂಡಾಗ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಶಿಕ್ಷಕರನ್ನು ಬಿ.ಎಲ್‌.ಒ. ಕರ್ತವ್ಯಕ್ಕೆ ನಿಯೋಜಿಸಬಾರದೆಂದು 2018ರಲ್ಲಿ ಶಿಕ್ಷಣ ಇಲಾಖೆಯ ನಿರ್ದೇಶಕರು ಮತ್ತು ಸರ್ವೋಚ್ಚ ನ್ಯಾಯಾಲಯವು ಆದೇಶ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಹೇಳಿಕೆಯನ್ನು ಮನಗಂಡು, ಸರ್ಕಾರ ಮತ್ತು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಕರ್ತವ್ಯದಿಂದ ಮುಕ್ತಗೊಳಿಸಿ ಶೈಕ್ಷಣಿಕ ಪ್ರಗತಿಗೆ ಸಹಕರಿಸಬೇಕೆಂದು ಅವರು ಆಗ್ರಹಿಸಿದರು. ಹಾಗೂ
ಈ ಆದೇಶವನ್ನು ತಕ್ಷಣ ಹಿಂತೆಗೆದುಕೊಳ್ಳಬೇಕೆಂದು ಪೋಷಕರು ಒತ್ತಡವನ್ನು ತರುತ್ತಿದ್ದಾರೆ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಈ ಆದೇಶದ  ಸರ್ಕಾರಿ ಶಾಲೆಯ ಪೋಷಕರು ತೀವ್ರವಾದ ಪ್ರತಿಭಟನೆಯನ್ನು ಮಾಡಲು ತೀರ್ಮಾನಿಸಿರುತ್ತಾರೆ ಎಂದು ತಿಳಿಸಿದರು..

BOOTH LEVEL OFFICER..


Discover more from Prasarana news

Subscribe to get the latest posts sent to your email.

  • Related Posts

    SAGARA NEWS:ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ, ಕಳಸವಳ್ಳಿ-ಅಂಬರಗೊಂಡ್ಲು ಸೇತುವೆ ಲೋಕಾರ್ಪಣೆ ಕಾರ್ಯಕ್ರಮ: ಹರತಾಳು ಹಾಲಪ್ಪ..

    ಹೊಸನಗರ: ಕಳಸವಳ್ಳಿ-ಅಂಬರಗೊಂಡ್ಲು  ಸೇತುವೆ ಉದ್ಘಾಟನಾ ಕಾರ್ಯಕ್ರಮ ಒಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ. ನಾಡಿಗೆ ಬೆಳಕು ನೀಡಿ ಸರ್ವಸ್ವವನ್ನು ಕಳೆದುಕೊಂಡ ಈ ಭಾಗದ ಸಂತ್ರಸ್ತರ ಆರು ದಶಕಗಳ ಕನಸು ನನಸಾಗುವ ಸಂದರ್ಭ ಸಮೀಪಿಸುತ್ತಿದ್ದು ಜುಲೈ 14 ರ ದಿನ ಆ ದಿನಕ್ಕೆ ಸಾಕ್ಷಿಯಾಗಲಿದೆ ಎಂದು…

    Read more

    HOSANAGARA NEWS:    ಅಗತ್ಯ ವೈದ್ಯರ ನೇಮಕಕ್ಕಾಗಿ ಮುಂದುವರೆದ ಪ್ರತಿಭಟನೆ…
    ಪ್ರತಿಭಟನಾ ಸ್ಥಳಕ್ಕೆ ಬಾರದ ಅಧಿಕಾರಿಗಳು…

    ಹೊಸನಗರ: ರಾಜ್ಯದಲ್ಲೇ  ಅತಿ ಹೆಚ್ಚು ಮಳೆ ಬೀಳುವ ಪ್ರದೇಶವಾದ ತಾಲೂಕಿನ ನಗರ ಹೋಬಳಿಯ ಮೂಡುಗೊಪ್ಪ ಗ್ರಾಮದ  ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಅಗತ್ಯ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆಯನ್ನು ಸರಿಪಡಿಸುವಂತೆ ನಿನ್ನೆ ರಾತ್ರಿಯಿಂದಲೇ ಅಹೋರಾತ್ರಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು ಇಂದು ಸಹ ವೈದ್ಯರನ್ನು…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading