BUDDHA PURNIMA:ಬುದ್ಧ ಪೌರ್ಣಿಮೆ ಅಂಗವಾಗಿ ಸಾಹಿತ್ಯ ಹುಣ್ಣಿಮೆ

ಹೊಸನಗರ: ಆಯಾ ಕಾಲಕ್ಕೆ ಅನುಗುಣವಾಗಿ ಮಹಾತ್ಮರ ಜನನ ಆಗುತ್ತದೆ. ಸಮಾಜ ಪರಿವರ್ತನೆಗೆ ಗೌತಮ ಬುದ್ದ ನೀಡಿದ ಕೊಡುಗೆ ಅಪಾರ ವಾಗಿದ್ದು, ಆತನ ತತ್ವ ಆದರ್ಶಗಳು ಸರ್ವಕಾಲಿಕ ಸತ್ಯವೇ ಆಗಿದೆ‌ ಎಂದು ವಿಶ್ರಾಂತ ಪ್ರಾಚಾರ್ಯ, ಸಾಹಿತಿ ಡಾ. ಶಾಂತರಾಮ ಪ್ರಭು ತಿಳಿಸಿದರು.
ಪಟ್ಟಣಕ್ಕೆ ಸಮೀಪದ ವರಕೋಡು ಗ್ರಾಮದ ಕೃಷಿಕ ಡಾ. ಅಶೋಕ ಅವರ ಫಾರಂ ಹೌಸ್ ಆವರಣದಲ್ಲಿ ಬುದ್ದ ಪೌರ್ಣಿಮೆ ಅಂಗವಾಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಸಾಹಿತ್ಯ ಹುಣ್ಣುಮೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಾಲೂಕು ಕಸಾಪ ಅಧ್ಯಕ್ಷರಾದ ಗಣೇಶ್ ಮೂರ್ತಿ ಪ್ರಾಸ್ತಾವಿಕ ಮಾತನಾಡಿ, ಕಳೆದ ಐದು ತಿಂಗಳ ತಮ್ಮ ಅಧ್ಯಕ್ಷೀಯ ಅವಧಿಯಲ್ಲಿ ನಿರಂತರ 25 ಸಾಹಿತ್ಯ ಪೂರಕ ಕಾರ್ಯಕ್ರಮ ಆಯೋಜನೆಗೆ ಸಾಹಿತ್ಯ ಪ್ರೇಮಿಗಳ ಸಹಕಾರವೇ ಕಾರಣವೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಸಾಪ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಮಾತನಾಡಿ, ಕಳೆದ 20 ವರ್ಷಗಳಿಂದ ಸಾಹಿತ್ಯ ಹುಣ್ಣುಮೆ ಕಾರ್ಯಕ್ರಮ ಅದ್ದೂರಿಯಾಗಿ ನಡೆದು ಬರಲು ಜಿಲ್ಲೆಯ ಸಾಹಿತ್ಯಾಸಕ್ತರ ಪ್ರೇರಣೆ ಕಾರಣವೆಂದರು.
ಇದೇ ವೇಳೆ ಗಮಕಿ ಅನುಪಮ ಸುರೇಶ್ ಹಾಗು ಡಾ. ಅಶೋಕ ಬುದ್ದನ ಜೀವನ-ಸಾಧನೆ ಕುರಿತು ಗಮಕ ವಾಚಿಸಿದರು.
ಕೆಸುವಿನ ಮನೆ ರತ್ನಾಕರ್,ಇಲಿಯಾಸ್
ನವೀನ್ ಕುಮಾರ್ ಶಿವಮೊಗ್ಗ ಕವನ ವಾಚಿಸಿದರು
ವಸಿಷ್ಠ ಮತ್ತು ಬಾಲಕ ಚೈತನ್ಯ ಕಥೆ ಹೇಳಿದರೆ,
ಕೋರ್ಟ್ ಕಟಕಟೆಯಲ್ಲಿನ  ಹಾಸ್ಯ ಪ್ರಸಂಗದ
ನಿಜ ಸಂಗತಿಗಳನ್ನು ವಕೀಲ ಕೆ. ಬಿ ಪ್ರಶಾಂತ್  ತಮ್ಮ ಅನುಭವ ಮೂಲಕ ತಿಳಿಸಿ ಸಭಿಕರನ್ನು ನಗೆಗಡಲಲ್ಲಿ ತೇಲಿಸಿದರು.
ನಿವೃತ್ತ ಶಿಕ್ಷಕ ಕುಬೇಂದ್ರಪ್ಪ ಪ್ರಾರ್ಥಿಸಿದರು.
ಸಾಹಿತಿ ಪ್ರವೀಣ್ ಎಂ ಕಾರ್ಗಡಿ ಸ್ವಾಗತಿಸಿ,
ಅಶ್ವಿನಿ ಪಂಡಿತ್ ನಿರೂಪಿಸಿದರು.ಶಿಕ್ಷಕ ಶಿವಪ್ಪ  ವಂದಿಸಿದರು
ಕಸಾಪ ತಾಲೂಕು ಕಾರ್ಯದರ್ಶಿ ಕೆ.ಜಿ. ನಾಗೇಶ್ ಕಾರ್ಯಕ್ರಮ ನಿರ್ವಹಿಸಿದರು...

BUDDHA PURNIMA..


Discover more from Prasarana news

Subscribe to get the latest posts sent to your email.

  • Related Posts

    RIPPONPET NEWS:ಕಳಸವಳ್ಳಿ ಸಿಗಂದೂರು ಸೇತುವೆಗೆ ಬಿ.ಎಸ್.ಯಡಿಯೂರಪ್ಪ ಹೆಸರಿಡುವಂತೆ ಒತ್ತಾಯ…

    ರಿಪ್ಪನ್‌ಪೇಟೆ: ಇದೇ 14 ರಂದು ಲೋಕಾರ್ಪಣೆಗೊಳ್ಳುತ್ತಿರುವ ಅಂಬಾರಗೊಡ್ಲು-ಕಳಸವಳ್ಳಿ ಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹೆಸರಿಡುವಂತೆ ಹೊಸನಗರ ತಾಲ್ಲೂಕು ಆಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಸರ್ಕಾರವನ್ನು ಆಗ್ರಹಿಸಿ ನಾಡಕಛೇರಿಯ ಉಪತಹಶಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದಾಗಿ ಹೊಸನಗರ ಆಖಿಲ ಭಾರತ…

    Read more

    RIPPONPET NEWS: ಇರುಳುಗಣ್ಣು ನಿವಾರಣೆ ವಿಟಮಿನ್ ಡ್ರಾಪ್ ಸೇವಿಸಿ 10 ಕ್ಕೂ ಆಧಿಕ ಮಕ್ಕಳು ಅಸ್ವಸ್ಥ…..

    ರಿಪ್ಪನ್‌ಪೇಟೆ;-ಮಂಗಳವಾರ ದಿನ ಅಂಗನವಾಡಿ ಮಕ್ಕಳಿಗೆ ನೀಡಲಾದ ವಿಟಮಿನ್ ಹನಿ ಡ್ರಾಪ್ ಸೇವನೆಯಿಂದಾಗಿ 11 ಕ್ಕೂ ಅಧಿಕ ಮಕ್ಕಳಲ್ಲಿ ವಾಂತಿ ಬೇದಿ ಕಾಣಿಸಿಕೊಂಡು ಅಸ್ವಸ್ಥರಾಗಿರುವ ಘಟನೆ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿರೇಸಾನಿ ಆಂಗನವಾಡಿ ಕೇಂದ್ರದಲ್ಲಿ ನಡೆದಿದೆ.ಇರುಳುಗಣ್ಣು ನಿವಾರಣೆಗಾಗಿ  ಮುಂಜಾಗ್ರತಾ ಕ್ರಮವಾಗಿ ಅAಗನವಾಡಿಯಲ್ಲಿ…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading