GKB:BIRTHDAY:ಶಾಸಕರ ಅರ್ಥಪೂರ್ಣ ಹುಟ್ಟುಹಬ್ಬ ನಿಮಿತ್ತ…
ಅಭಿಮಾನಿಗಳಿಂದ ಸಮಾಜಮುಖಿ ಕಾರ್ಯ…

ಹೊಸನಗರ: ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ
ಬೇಳೂರು ಗೋಪಾಲಕೃಷ್ಣ ರವರ ಹುಟ್ಟುಹಬ್ಬ ಫೆಬ್ರವರಿ 22 ರಂದು ಆಚರಿಸುತಿದ್ದು ಅವರ ಅಭಿಮಾನಿಗಳು ಶಾಸಕರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಹಿನ್ನೆಲೆ  ಸಮಾಜಮುಖಿ ಕಾರ್ಯವನ್ನು ಮಾಡುವ ಮೂಲಕ ಭೇಷ್ ಎನಿಸಿಕೊಂಡಿದ್ದಾರೆ.
ಹೌದು ಹೊಸನಗರ ತಾಲೂಕಿನ ನಿಟ್ಟೂರು ಭಾಗದ ಬಡ ಬ್ರಾಹ್ಮಣ ಜನಾಂಗದ ದಂಪತಿಗಳಿಬ್ಬರು ನೆರೆ ಹಾವಳಿಯಿಂದ ತಮ್ಮ ಮನೆ ಶಿಥಿಲಾವಸ್ಥೆಗೆ ತಲುಪಿತ್ತು ಸರ್ಕಾರದ ಅನುದಾನ ತರಿಸಲು ಈ ಬಗ್ಗೆ ವಿಶೇಷ ಕಾಳಜಿ ವಹಿಸಿದರು ಕೆಲವು ತಾಂತ್ರಿಕ ಕಾರಣಗಳಿಂದ ಸಾಧ್ಯವಾಗಿರಲಿಲ್ಲ...ಕಳೆದ ವರ್ಷ ಇದೇ ತಂಡದವರು ಬಡ ದಲಿತ ಕುಟುಂಬದ ಮನೆ ದುರಸ್ತಿ ಕಾರ್ಯವನ್ನು ಕೈಗೊಂಡಿದ್ದನ್ನು ಸ್ಮರಿಸಿಕೊಳ್ಳಬಹುದು.
ಈ ಹಿನ್ನಲೆಯಲ್ಲಿ ನಿಟ್ಟೂರು ಕಾಂಗ್ರೆಸ್ ಘಟಕದ ವತಿಯಿಂದ ಮುಖಂಡ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಮಾರ್ಗದರ್ಶನದಲ್ಲಿ 2 ಲಕ್ಷ ರೂ ವೆಚ್ಚದಲ್ಲಿ ಇಂದು ನಿಟ್ಟೂರು ಗ್ರಾಮದ ಕಲ್ಸಂಕ ರಾಮಚಂದ್ರ ಭಟ್ ಹಾಗೂ ಗಾಯತ್ರಿ ದಂಪತಿಗಳ ಮನೆ ದುರಸ್ತಿ ಹಾಗೂ ಕಾರ್ಯಕರ್ತರಿಂದ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂಧರ್ಭದಲ್ಲಿ ಮಾತನಾಡಿದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಬಡವರ ಪಾಲಿನ ಆಶಾಕಿರಣರಾದ ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರ ಹುಟ್ಟುಹಬ್ಬದ ಅಂಗವಾಗಿ ಬಡ ಕುಟುಂಬಕ್ಕೆ ಅವರ ಅಭಿಮಾನಿಗಳು ನೆರವಾಗುತ್ತಿರುವುದು  ಅರ್ಥಪೂರ್ಣವಾಗಿದೆ.ಕೆಲವು ತಾಂತ್ರಿಕ ಕಾರಣಗಳಿಂದ ಆ ಕುಟುಂಬಕ್ಕೆ ಸರ್ಕಾರದ ನೆರವು ಕೊಡಿಸಲು ಸಾಧ್ಯವಾಗಿರಲಿಲ್ಲ ಆ ಹಿನ್ನಲೆಯಲ್ಲಿ ನಿಟ್ಟೂರು ಕಾಂಗ್ರೆಸ್ ಘಟಕದ ವತಿಯಿಂದ ಇಂತಹ ಮಹತ್ಕಾರ್ಯಕ್ಕೆ ಕೈ ಹಾಕಿದ್ದೇವೆ ಎಂದರು.
ಈ ಸಂಧರ್ಭದಲ್ಲಿ ನಾಗೇಂದ್ರ ಜೋಗಿ , ವಿಶ್ವನಾಥ್ ನಾಗೋಡಿ , ಶೋಭಾ , ರವೀಂದ್ರ ಚನ್ನಪ್ಪ ,ಶಾಸಕರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ , ಅಶೋಕ್ ಕುಂಬ್ಳೆ , ಸಂತೋಷ್ ಹಾಗೂ ಇನ್ನಿತರರಿದ್ದರು...

GKB:BIRTHDAY...


Discover more from Prasarana news

Subscribe to get the latest posts sent to your email.

  • Related Posts

    HARATHALU HALAPPA:   ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಾಡಿದ್ದಾರೆ: ಹರತಾಳು ಹಾಲಪ್ಪ…

    ಹೊಸನಗರ: ಅರಣ್ಯ ಒತ್ತುವರಿ ಜಾಗ ತೆರವು ನೆಪದಲ್ಲಿ ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ಹರತಾಳು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.ತಾಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಳಿಕೊಪ್ಪ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು…

    Read more

    RIPPONPET NEWS: ಕಾಲಭೈರವೇಶ್ವರ ಮಹಿಳಾ ಸಂಘದಿಂದ ಶರ್ಮಿನ್ಯಾವತಿ ನದಿಗೆ ಬಾಗಿನ ಅರ್ಪಣೆ..

    ರಿಪ್ಪನ್ ಪೇಟೆ: ಈ ಬಾರಿ ಸಮೃದ್ಧ ಮಳೆಯಾಗಿರುವ ಹಿನ್ನೆಲೆಯಲ್ಲಿ ಪ್ರಕೃತಿಗೆ ಕೃತಜ್ಞತೆ ಸಲ್ಲಿಸುವ ನಿಟ್ಟಿನಲ್ಲಿ ಕಾಲಭೈರವೇಶ್ವರ ಮಹಿಳಾ ಸಂಘದ ವತಿಯಿಂದ ಗವಟೂರಿನ ಶರ್ಮಿನ್ಯಾವತಿ ನದಿಗೆ ಶುಕ್ರವಾರ ಬಾಗಿನ ಅರ್ಪಿಸಲಾಯಿತು. ಈ ಬಗೆಯ ಸಾಂಪ್ರದಾಯಿಕ ಹಾಗೂ ಧಾರ್ಮಿಕ ಆಚರಣೆ ಮಹಿಳಾ ಸಂಘದ ಸದಸ್ಯರ…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading