GOPALKRISHNA BELUR: ಗ್ರಾಮ ಸಭೆಗೆ ಅಧಿಕಾರಿಗಳು ಖುದ್ದು ಹಾಜರಾಗಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು…

ಹೊಸನಗರ : ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮ ಸಭೆ ಮಾಡಿ. ಅಲ್ಲಿನ ಅವ್ಯವಸ್ಥೆ, ಕುಂದು ಕೊರತೆ ನಿರ್ವಹಿಸಲು ಸಾಧ್ಯವಾಗುತ್ತದೆ. ಗ್ರಾಮ ಸಭೆಗೆ ಅಧಿಕಾರಿಗಳು ಖುದ್ದು ಹಾಜರಾಗುವಂತೆ ನೋಡಿಕೊಳ್ಳಬೇಕು. ಸಭೆ ಬಾರದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ ನೀಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಗ್ರಾಮಸಭೆಯಲ್ಲಿ ಮಾತ್ರ ಗ್ರಾಮೀಣ ಪ್ರದೇಶದ ಸಮಸ್ಯೆ ಕೇಳಿ ಬರಲು ಸಾಧ್ಯ. ಆ ಸಭೆಗೆ ಅಧಿಕಾರಿಗಳು ಹೋಗದೇ ಕಚೇರಿಯಲ್ಲಿ ಕಾಲಕಳೆದರೇ ಅಲ್ಲಿನ ಜನರ ಸಮಸ್ಯೆ ನಿವಾರಣೆಗೆ ಆಗಲು ಸಾಧ್ಯವಿಲ್ಲ. ಕಡ್ಡಾಯ ವಾಗಿ ಸಭೆ ನಡೆಯಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಧೋರಣೆ ತಾಳುವ ಅಧಿಕಾರಿಗಳನ್ನು ಅಮಾನತು ಮಾಡಿ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರ ಕುಮಾರ್ ಅವರಿಗೆ ತಾಕೀತು ಮಾಡಿದರು.
ಗ್ರಾಮ ಪಂಚಾಯತಿಯಲ್ಲಿನ 15ನೇ ಹಣಕಾಸಿನ ಅನುದಾನ ತಡೆಹಿಡಿಯುವ ಪ್ರಯತ್ನಬೇಡ. ಕೂಡಲೇ ಹಣ ಬಿಡುಗಡೆ ಮಾಡಬೇಕು. ಎಂದು ತಾಲ್ಲೂಕು ಪಂಚಾಯತಿ ಇಒ ಅವರಿಗೆ ಸೂಚನೆ ನೀಡಿದರು.
ಹೊಸನಗರ ತಾಲ್ಲೂಕು ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆ ತಾಂಡವಾಡುತ್ತಿದೆ. ಸಮಸ್ಯೆ ನಿವಾರಣೆಗೆ ಅಧಿಕಾರಿಗಳು ಗಮನ ನೀಡುತ್ತಿಲ್ಲ. ಈ ಕೂಡಲೆ ಹೆಚ್ಚಿನ ನಿಗಾ ವಹಿಸುವಂತೆ ಎಚ್ಚರಿಸಿದರು.
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತದ ಬಗ್ಗೆ ಗ್ರಾಮೀಣ ಭಾಗದಲ್ಲಿ ವ್ಯಾಪಕ ಜನ ಜಾಗೃತಿ ಆಗಬೇಕಾಗಿದೆ. ಜನರು ಈ ನಿಟ್ಟಿನಲ್ಲಿ ಜಾಗೃತರಾಗಿ ವಲ್ಲಿ ಆರೋಗ್ಯ ಇಲಾಖೆ ಯೋಜನೆ ರೂಪಿಸಿಕೊಳ್ಳಬೇಕು ಎಂದರು.
ರಿಪ್ಪನ್ ಪೇಟೆ ಪಟ್ಟಣದಲ್ಲಿರುವ ಆಸ್ಪತ್ರೆಗೆ ಹೆಚ್ಚಿನ ವೈದ್ಯರ ಅವಶ್ಯಕತೆ ಇದೆ.  ಇರುವ ಒಬ್ಬ ವೈದ್ಯರಿಂದ ಆಸ್ಪತ್ರೆ ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.  ಮತ್ತೊರ್ವ ವೈದ್ಯರನ್ನು ನೇಮಕ ಮಾಡುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ಜತೆ ಫೋನ್ ಮೂಲಕ ಮಾತನಾಡಿ ಒತ್ತಾಯಿಸಿದರು.

ಮಕ್ಕಳ ಆರೋಗ್ಯ ಮುಖ್ಯ:
ಮಕ್ಕಳ ಆರೋಗ್ಯ ಪಾಲನೆ ಮತ್ತು ಅವರ ಆಹಾರ ಸೌಲಭ್ಯಗಳ ವಿಚಾರದಲ್ಲಿ ಗಮನ ನೀಡದೆ ಅಂಗನವಾಡಿ ಶಿಕ್ಷಕಿಯರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮಳಲಿ ಮತ್ತಿತರರ ಅಂಗನವಾಡಿ ಕೇಂದ್ರಗಳ ಕುರಿತು ದೂರು ಬರುತ್ತಿದೆ. ತಪ್ಪು ಮಾಡಿದವರನ್ನು ರಕ್ಷಿಸುವ ಕೆಲಸ ಬೇಡ ಎಂದು ಎಚ್ಚರಿಕೆ ನೀಡಿದರು.

GOPALKRISHNA BELUR..


Discover more from Prasarana news

Subscribe to get the latest posts sent to your email.

  • Related Posts

    BYR:HOSANAGARA: ಸಂಸದರಿಂದ: ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಣೆ…

    ಹೊಸನಗರ:ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಯೋಜನೆಯಡಿ ಇಂದು  ಸರ್ಕಾರಿ ಶಾಲೆಯಲ್ಲಿ ಶಿಕ್ಷಣಾಭ್ಯಾಸ ಮಾಡುತ್ತಿರುವ ಪ್ರಾಥಮಿಕ ಶಾಲೆಯ 1 ರಿಂದ 4 ನೆ ತರಗತಿ ಮಕ್ಕಳಿಗೆ ಸ್ವಟರ್ ಅನ್ನು ಸಂಸದರಾದ ಬಿ ವೈ ರಾಘವೇಂದ್ರ ವಿತರಿಸಿದರು.ವಿತರಣೆ ಬಳಿಕ ಮಾತನಾಡಿದ ಅವರು…

    Read more

    RIPPONPET NEWS:ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ….

    ರಿಪ್ಪನ್‌ಪೇಟೆ ;-ಜುಲೈ 19 ರ ಶನಿವಾರ ಸಂಜೆ   ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.ಹಾಗೂ ಪದವಿ ಕಾಲೇಜ್‌ನಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಆಂಕಗಳಿಸಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ 2025-26 ನೇ ಸಾಲಿನ ನೂತನರೋಟರಿಕ್ಲಬ್ ಪದವಿ ಸ್ವೀಕಾರ…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading