
ನವದೆಹಲಿ: ಮಾಜಿ ಪ್ರಧಾನಿ, ಆರ್ಥಿಕ ಚತುರ ಮನಮೋಹನ್ ಸಿಂಗ್ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಿದೆ. 92ನೇ ವಯಸ್ಸಿನಲ್ಲಿ ಮನಮೋಹನ್ ಸಿಂಗ್ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ದೆಹಲಿ ಏಮ್ಸ್ (Delhi Aims) ಆಸ್ಪತ್ರೆಗೆ ನಿನ್ನೆ ರಾತ್ರಿ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ಸೇರಿಸುವಾಗಲೇ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ನಾಳೆ ಕರ್ನಾಟಕ ರಾಜ್ಯಾದ್ಯಂತೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ..
Government Holiday.
