
ಹೊಸನಗರ: ಇತಿಹಾಸ ಪ್ರಸಿದ್ಧ ತಾಲ್ಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನಾಲ್ಕನೇ ಅದ್ದೂರಿ ಜಾತ್ರೆ ಶುಕ್ರವಾರ ನಡೆಲಿದ್ದು, ಕ್ಷೇತ್ರದ ಮಾಜಿ ಶಾಸಕ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಬಿ.ಸ್ವಾಮಿರಾವ್ ಅವರಿಗೆ ಜಾತ್ರಾ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ, ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ಮೇರೆಗೆ, ಕಾರ್ಯಾಧ್ಯಕ್ಷ ಕಲಗೋಡು ರತ್ನಾಕರ ಸಲಹೆಯಂತೆ ಸಮಿತಿಯ ಸದಸ್ಯರು ಗುರುವಾರ ಸ್ವಾಮಿರಾವ್ ಅವರ ಸ್ವ ಗೃಹಕ್ಕೆ ತೆರಳಿ ಆತ್ಮೀಯವಾಗಿ ಸನ್ಮಾನಿಸುವ ಮೂಲಕ ವಿಶೇಷ ಆಹ್ವಾನ ನೀಡಿದರು.
ಈ ವೇಳೆ ಸ್ವಾಮಿರಾವ್ ಮಾತನಾಡಿ, ಅನೇಕ ಭಕ್ತಾದಿಗಳು ತನು-ಮನ-ಧನ ನೀಡಿದ ಸಹಕಾರದಿಂದ ರೂ ಕೋಟಿ ವೆಚ್ಚದ ನೂತನ ಶಿಲಾಮಯ ದೇಗುಲ ನಿರ್ಮಾಣ ಸಾಧ್ಯವಾಯಿತು. ನಾನು ಇಲ್ಲಿ ನಿಮಿತ್ತ ಮಾತ್ರ. ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎಂಬ ನಾನ್ನುಡಿಯಂತೆ ಕಾರ್ಯ ನಿರ್ವಹಿಸಿದೆ ವಿನಹ ಇದರಲ್ಲಿ ಯಾವುದೇ ಹೆಚ್ಚುಗಾರಿಕೆ ನನ್ನಗಿಲ್ಲ ಎಂದರು.
ಈ ವೇಳೆ ಜಾತ್ರಾ ಸಮಿತಿ ಸದಸ್ಯರಾದ ಬಿ.ಜಿ.ಚಂದ್ರಮೌಳಿ, ಪುಟ್ಡಪ್ಪ, ಸುಧೀರ್ ಭಟ್, ಗಣೇಶ್, ಕೋಡೂರು ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು
JENUKALLAMMA..
Discover more from Prasarana news
Subscribe to get the latest posts sent to your email.
