KANTARA CHAPTER1: ಕಾಂತಾರ ಚಾಪ್ಟರ್ 1 ಚಿತ್ರೀಕರಣ ವೇಳೆ ಅವಘಡ ನಡೆದಿಲ್ಲ: ಚಿತ್ರತಂಡ ಸ್ಪಷ್ಟನೆ…

ಹೊಸನಗರ: ಕಾಂತಾರ ಚಾಪ್ಟರ್ 1 ಚಿತ್ರೀಕರಣ ಸಮಯದಲ್ಲಿ ಯಾವುದೇ ಅವಘಡ ನಡೆದಿಲ್ಲ ಎಂದು ಹೊಂಬಾಳೆ ಫಿಲಂಸ್ ಸಂಸ್ಥೆಯ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆದರ್ಶ ಸ್ಪಷ್ಟನೆ ನೀಡಿದ್ದಾರೆ.
ಹೊಸನಗರ ತಾಲ್ಲೂಕು ಯಡೂರು ಸಮೀಪದ ಮೇಲಿನಕೊಪ್ಪ ಮಾಣಿ ಹಿನ್ನೀರಿನ ಪ್ರದೇಶದಲ್ಲಿ  ಕಳೆದ ಕೆಲ ದಿನಗಳಿಂದ ಕಾಂತಾರ ಚಾಪ್ಟರ್ 1 ಚಿತ್ರೀಕರಣ ನಡೆಯುತ್ತಿದೆ. ಚಿತ್ರೀಕರಣ ಸಮಯದಲ್ಲಿ ದೋಣಿ ದುರಂತ ಸಂಭವಿಸಿದೆ.ದೊಡ್ಡ ಅವಘಡ  ನಡೆದಿದೆ. ನಾಯಕನಟ ರಿಷಬ್ ಶೆಟ್ಟಿ ಸೇರಿದಂತೆ ಹಲವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಇಲ್ಲಿ ಯಾವುದೇ ಅವಘಡ ನಡೆದಿಲ್ಲ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ
ಎಂದು ಅವರು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದರು.
ಶನಿವಾರ ಸಂಜೆ  ಈ ಭಾಗದಲ್ಲಿ ಬಾರಿ ಗಾಳಿ ಮಳೆ ಹೆಚ್ಚಿದ್ದು ಚಿತ್ರೀಕರಣ ಮಾಡಲು ಹಾಕಿದ್ದ ಶಿಪ್ ಸೆಟ್ಟಿಂಗ್ ಹಾನಿಗೊಳಗಾಗಿದೆ. ಮತ್ಯಾವುದೇ ದುರಂತ ನಡೆದಿಲ್ಲ.
ನಟರು, ಸಹನಟರು  ಆರೋಗ್ಯವಾಗಿದ್ದು ಚಿತ್ರೀಕರಣ ನಡೆಯುತ್ತಿದೆ.
ನಾವು ಹಿನ್ನೀರಿನ ಭಾಗದಲ್ಲಿ ಚಿತ್ರೀಕರಣ ನಡೆಸಿಲ್ಲ. ಹಿನ್ನೆಲೆ ಸೆಟ್ಟಿಂಗ್ ಮಾಡಿದ್ದ ಶಿಪ್ ಸೆಟ್ಟಿಂಗ್ ಬಳಸಲಾಗಿದೆ. ಅಷ್ಟೆ.
ಈ ಭಾಗದಲ್ಲಿ ಚಿತ್ರೀಕರಣ ನಡೆಸಲು ಎಲ್ಲಾ ಇಲಾಖೆಗಳ ಪರವಾನಿಗೆ ಪಡೆಯಲಾಗಿದೆ ಎಂದು ತಿಳಿಸಿದರು.

KANTARA CHAPTER1..


Discover more from Prasarana news

Subscribe to get the latest posts sent to your email.

  • Related Posts

    HOSANAGARA NEWS: ನಟಿ ಸರೋಜಾ ದೇವಿ ನಿಧನ:  ಚುಂಚಾದ್ರಿ ಮಹಿಳಾ ಸಂಘದಿಂದ ಸಂತಾಪ..

    ಹೊಸನಗರ:ಬಹುಭಾಷಾ ನಟಿ ಬಿ. ಸರೋಜಾದೇವಿ (87) ಅವರು ಸೋಮವಾರ ನಿಧನರಾಗಿಧು. ಅವರ ನಿಧನಕ್ಕೆ   ಚುಂಚಾದ್ರಿ ಮಹಿಳಾ ಸಂಘ ಸಂತಾಪ ಸೂಚಿಸಿದೆ.ಹಿರಿಯ ನಟಿಯ ಅಗಲಿಕೆಗೆ ಶ್ರದ್ದಾಂಜಲಿ ಸಭೆ ನಡೆಸಿ ಮಾತನಾಡಿದ ಚುಂಚಾದ್ರಿ ಮಹಿಳಾ ಸಂಘದ ಅಧ್ಯಕ್ಷರಾದ ಮೈನಾವತಿ ರಾಜಮೂರ್ತಿ. ಆರೂವರೆ ದಶಕಗಳು ಚಿತ್ರರಂಗದಲ್ಲಿ‌…

    Read more

    RIPPONPET NEWS:         ರಿಪ್ಪನ್ ಪೇಟೆ ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ  ಅಧ್ಯಕ್ಷರಾಗಿ ಸುಧೀರ್ ಪಿ ಆಯ್ಕೆ…

    ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತಿಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ  58ನೇ ಗಣೇಶೋತ್ಸವದ ಅಧ್ಯಕ್ಷರಾಗಿ ಸುಧೀರ್ ಪಿ ಹಾಗೂ ಕಾರ್ಯದರ್ಶಿಯಾಗಿ ಮುರುಳಿ ಕೆರೆಹಳ್ಳಿ ಆಯ್ಕೆಯಾಗಿದ್ದಾರೆ. ಪಟ್ಟಣದ ಹಿಂದೂ ರಾಷ್ಟ್ರಸೇನಾದ ಸಭಾಂಗಣದಲ್ಲಿ ನಡೆದ ಗಣೇಶ್ೋತ್ಸವ  ಸಮಿತಿಯ ಸಭೆಯಲ್ಲಿ 2024 ರ ಹಿಂದೂ…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading