
*ಹೊಸನಗರ : ಮಣಿಪಾಲ ಆರೋಗ್ಯಕಾರ್ಡ್ 2024 ರ ನೋಂದಾವಣೆಗೆ 30ನೇ ನವೆಂಬರ್ 2024 ಕೊನೆಯ ದಿನ ಎಂದು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯಿತಿಯ ರೂಪದಲ್ಲಿ ಹಿಂಪಡೆಯಬಹುದು. "ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ" ಎಂಬುದು ಮಣಿಪಾಲ್ ಆರೋಗ್ಯಕಾರ್ಡ್ ನ ದ್ಯೇಯ ವಾಕ್ಯ.
ಮಣಿಪಾಲ್ ಆರೋಗ್ಯ ಕಾರ್ಡ್ದಾರರು ತಜ್ಞ ಮತ್ತು ಸೂಪರ್ ಸ್ಪೆಷಲಿಸ್ಟ್ ವೈದ್ಯರೊಂದಿಗೆ ಸಮಾಲೋಚನೆ ಶುಲ್ಕದಲ್ಲಿ 50% ರಿಯಾಯಿತಿ, ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆ ಸೇವೆಯಲ್ಲಿ 25% ರಿಯಾಯಿತಿ, ರೇಡಿಯಾಲಜಿ , ಹೊರರೋಗಿ ಕಾರ್ಯವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯಲ್ಲಿ 20% ರಿಯಾಯಿತಿ, ಡಯಾಲಿಸಿಸ್ನಲ್ಲಿ ₹ 100 ರಿಯಾಯಿತಿ, ಆಸ್ಪತ್ರೆಯ ಔಷಧಿಗಳ ಮೇಲೆ 10% ವರೆಗೆ ರಿಯಾಯಿತಿ ಮತ್ತು ಜನರಲ್ ವಾರ್ಡ್ನಲ್ಲಿ ಒಳರೋಗಿಗಳ ಬಿಲ್ಗಳಲ್ಲಿ (ಕಾನ್ಸುಮಬೆಲ್ಸ್ ಮತ್ತು ಪ್ಯಾಕೇಜ್ಗಳನ್ನು ಹೊರತುಪಡಿಸಿ) 25% ರಿಯಾಯಿತಿ ಸೌಲಭ್ಯವಿದೆ.

ಮಣಿಪಾಲ್ ಆರೋಗ್ಯ ಕಾರ್ಡ್ 2024ರ ಯೋಜನೆಯು “ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 350 / -, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹ 700/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 900/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 600/-, ಕುಟುಂಬಕ್ಕೆ ₹ 950/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ₹ 1100/- ಆಗಿರುತ್ತದೆ.
ಕಾರ್ಡ್ದಾರರು ಕಸ್ತೂರ್ಬಾ ಆಸ್ಪತ್ರೆ-ಮಣಿಪಾಲ, ಡಾ.ಟಿಎಂಎ ಪೈ ಆಸ್ಪತ್ರೆ-ಉಡುಪಿ, ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ-ಕಾರ್ಕಳ, ಕೆಎಂಸಿ ಆಸ್ಪತ್ರೆ-ಮಂಗಳೂರು ಮತ್ತು ಅತ್ತಾವರ, ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ-ಕಟೀಲು, ಮಣಿಪಾಲ ಆಸ್ಪತ್ರೆ-ಗೋವಾ ಮತ್ತು ಮಣಿಪಾಲ ಹಾಗೂ ಮಂಗಳೂರಿನಲ್ಲಿನ ದಂತ ಕಾಲೇಜುಗಳಲ್ಲಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಮತ್ತು ಮಂಗಳೂರಿನಲ್ಲಿ ಇತರ ಆಸ್ಪತ್ರೆಗಳಲ್ಲಿನ ರಿಯಾಯಿತಿಗಳು ಮತ್ತು ಹೆಚ್ಚಿನ ಮಾಹಿತಿಗಾಗಿ, www.manipalhealthcard.com ಗೆ ಭೇಟಿ ನೀಡಿ ಅಥವಾ 9980854700 / 08202923748 ಅನ್ನು ಸಂಪರ್ಕಿಸಿ. ಎಲ್ಲಾ ನಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕ ನೋಂದಣಿ ಮಾಡಬಹುದು.
ಪತ್ರಿಕಾಗೋಷ್ಟಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವ್ಯವಸ್ಥಾಪಕರಾದ ಶ್ರೀ ಮೋಹನ್ ಶೆಟ್ಟಿ ಹಾಗೂ ಮಾರುಕಟ್ಟೆ ವಿಭಾಗದ ಪ್ರತಿನಿಧಿಯಾದ ಶ್ರೀ ಪ್ರವೀಣ್, ಶ್ರೀ ಸಂದೀಪ್ ಇವರೆಲ್ಲರೂ ಉಪಸ್ಥಿತರಿದ್ದರು.
*2024 ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:*
· ಶ್ರೀಕಂಠ – 9483016851
. ಶಾಂತಮೂರ್ತಿ - 94487 87820
· ಷಣ್ಮುಖಪ್ಪ – 9591866656
· ಕೃಷ್ಣಮೂರ್ತಿ – 8762148359
· ಶಾರದ ವಿವಿಧೋದ್ದೇಶ ಸಹಕಾರಿ ನಿಯಮಿತ - 9480285636
MANIPAL AROGYA CARD
Discover more from Prasarana news
Subscribe to get the latest posts sent to your email.
