NOMINATING MEMBER:ನಾಯಕತ್ವ ಗುಣ ಬೆಳೆಸಿಕೊಳ್ಳಲು ಇದು ಉತ್ತಮ ಅವಕಾಶ: “ಬೇಳೂರು ಗೋಪಾಲಕೃಷ್ಣ”

ಹೊಸನಗರ: ನಾಮನಿರ್ದೇಶಕ ಸದಸ್ಯರಾಗಿ ನೇಮಕಗೊಂಡ ಎಲ್ಲಾ ಸದಸ್ಯರಿಗೆ ಜನಪರವಾದಂತಹ ಕೆಲಸವನ್ನು ಮಾಡುವ ಮೂಲಕ ನಾಯಕತ್ವ ಗುಣವನ್ನು ಬಳಸಿಕೊಳ್ಳಲು ಇದು ಉತ್ತಮ ಅವಕಾಶ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ವಿವಿಧ ಇಲಾಖೆಗಳ ನಾಮನಿರ್ದೇಶಿತ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಾಮ ನಿರ್ದೇಶನಗೊಂಡ ಬಳಿಕ ಆ ಸಮಿತಿಯಲ್ಲಿ ತಮ್ಮ ಪಾತ್ರವೇನು ಎನ್ನುವುದನ್ನು ಅರಿತು ಕಾರ್ಯನಿರ್ವಹಿಸಬೇಕು. ಕಾಲೇಜು, ಆಸ್ಪತ್ರೆ, ಆಶ್ರಯ, ಬಗರ್‌ಹುಕುಂ, ನಂತಹ ಸಮಿತಿಗಳ ಸದಸ್ಯರ ಜವಾಬ್ದಾರಿ ಸಾಕಷ್ಟಿದೆ. ಅಧಿಕಾರಿ ವರ್ಗದಿಂದ ತ್ವರಿತಗತಿಯಲ್ಲಿ ಕಾರ್ಯಗಳು ಆಗಬೇಕು ಹಾಗೂ ಯೋಜನೆಗಳ ಲಾಭ ಅರ್ಹರಿಗೆ ದೊರೆಯಬೇಕು. ಅಲ್ಲಿನ ಕುಂದು ಕೊರತೆಗಳ ಮಾಹಿತಿ ಕೆಲೆ ಹಾಕಿ ಸಭೆಯಲ್ಲಿ ಗಮನಕ್ಕೆ ತರಬೇಕು.

ಎಲ್ಲವನ್ನೂ ಶಾಸಕರೇ ಪ್ರತಿನಿತ್ಯ ಗಮನಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಪ್ರತಿಯೊಬ್ಬ ಸದಸ್ಯರು ತಮ್ಮ ಹೊಣೆಗಾರಿಕೆ ಅರಿತು ಕಾರ್ಯ ನಿರ್ವಹಿಸಬೇಕು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯರಾಗಲು ಸಹಾ ಇದು ಸಹಕಾರಿ ಆಗಲಿದೆ ಎನ್ನುವುದನ್ನು ಮರೆಯಬಾರದು ಎಂದರು, ಸಕ್ರಿಯರಾಗಿಲ್ಲದ ಸದಸ್ಯರನ್ನು ಬದಲಾಯಿಸುವ ಮೂಲಕ ಸಕ್ರಿಯರಾಗಿ ಕಾರ್ಯ ನಿರ್ವಹಿಸುವವರಿಗೆ ಅವಕಾಶವನ್ನು ಕೊಡಬೇಕು ಎಂದು ಈ ಸಂದರ್ಭದಲ್ಲಿ ತಿಳಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಹೊಸನಗರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಮೌಳಿ
ನಾಮ ನಿರ್ದೇಶನ ಗೊಂಡ ಕೆಲವರನ್ನ ಹೊರತುಪಡಿಸಿ ಉಳಿದಂತೆ ಅಧಿಕಾರಕ್ಕಾಗಿ ಆಯ್ಕೆಯಾದಂತೆ ಕಾಣುತ್ತಿದ್ದು ಕೆಲವು ನಾಮ ನಿರ್ದೇಶಕರು ಸರ್ಕಾರಿ ಕಛೇರಿಗಳ ಅಧಿಕಾರಿಗಳಿಗೆ ಹೆದರಿಸುವ ತಂತ್ರ ನಡೆಸುತ್ತಿದ್ದಾರೆ ಎಂದು ನಮ್ಮ ಗಮನಕ್ಕೆ ಈಗಾಗಲೇ ಬಂದಿದ್ದು ನೀವು ಈ ರೀತಿ ಮಾಡುವುದರಿಂದ ನಮ್ಮ ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣರವರಿಗೆ  ಅವಮಾನವಾಗುತ್ತಿದೆ. ಮುಂದೆಯೂ ಇವರೆ ಶಾಸಕರಾಗಬೇಕಾದರೆ ನೀವೆಲ್ಲರೂ ಒಗ್ಗಟಿನಿಂದ ಸರ್ಕಾರದ ಎಲ್ಲ ಯೋಜನೆಗಳನ್ನು ಗ್ರಾಮಸ್ಥರಿಗೆ ತಲುಪಿಸುವಂತೆ ಕೆಲಸ ಮಾಡಬೇಕೆಂದರು. ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮತಿ ಅಧ್ಯಕ್ಷ ಎಚ್.ಬಿ.ಚಿದಂಬರ್, ಶಾಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಸುಮಾ ಸುಬ್ರಹ್ಮಣ್ಯ, ಸದಾಶಿವ ಶ್ರೇಷ್ಠಿ, ಗುರುರಾಜ್ ಹೆಚ್.ಕೆ, ಜ್ಯೋತಿ ಚಂದ್ರಮೌಳಿ  ಉಪಸ್ಥಿತರಿದ್ದರು..

NOMINATING MEMBER.


Discover more from Prasarana news

Subscribe to get the latest posts sent to your email.

  • Related Posts

    RESIGNATION:ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಜಿ ಎನ್…

    ಹೊಸನಗರ:ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಬೂತ್ ಸಮಿತಿಗೆ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಜಿಎನ್ ರಾಜೀನಾಮೆ ನೀಡಿದ್ದಾರೆ.ತಮ್ಮ ರಾಜೀನಾಮೆ ಪತ್ರವನ್ನು ಹೊಸನಗರ ತಾಲ್ಲೂಕು ಬಿಜೆಪಿ ಕಛೇರಿಗೆ ತಲುಪಿಸಿದ್ದು ಅದರಲ್ಲಿ, 10 ವರ್ಷಗಳಿಂದ ಎಂ ಗುಡ್ಡೆಕೊಪ್ಪ ಗ್ರಾಮದ ಬೂತ್…

    Read more

    PRESIDENT:ಮೇಲಿನ ಬೆಸಿಗೆ ಗ್ರಾಮ ಪಂಚಾಯತ್ ಅವಿಶ್ವಾಸ ನಿರ್ಣಯಕ್ಕೆ ಸೋಲು..
    ಅಧ್ಯಕ್ಷರಾಗಿ ಶ್ರೀನಿವಾಸ್ ಮುಂದುವರಿಕೆ…

    ಹೊಸನಗರ:ತಾಲ್ಲೂಕಿನ ಮೇಲಿನ ಬೇಸಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಯಿತು.ಗ್ರಾಮ ಪಂಚಾಯಿತಿಯಲ್ಲಿ ಏಕ ಪಕ್ಷಿಯ ನಿರ್ಧಾರ ಹಾಗೂ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಅಧ್ಯಕ್ಷ ಶ್ರೀನಿವಾಸ್ ಅವರಲ್ಲಿ ವಿಶ್ವಾಸವಿಲ್ಲ ಎಂದು 7 ಮಂದಿ ಸದಸ್ಯರು ಸಾಗರ ಉಪ ವಿಭಾಗಾಧಿಕಾರಿ…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading