NOTICE BOARD:ಸೂಚನಾ ಫಲಕಗಳನ್ನು ಅಳವಡಿಸುವ ಮೂಲಕ ಅಪಘಾತ ತಡೆಗೆ ಮುಂದಾದ ಪಿ.ಎಸ್.ಐ ಪ್ರವೀಣ್ ನೇತೃತ್ವದ ತಂಡ…

ಹೊಸನಗರ: ತಾಲೂಕಿನ ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕೊಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನ ತಡೆಗಟ್ಟುವ ನಿಟ್ಟಿನಲ್ಲಿ ಮಂಗಳವಾರ ರಿಪ್ಪಿನ್ ಪೇಟೆ ಪೊಲೀಸ್ ಠಾಣೆ ಪಿಎಸ್ಐ ಪ್ರವೀಣ್ ನೇತೃತ್ವದ ತಂಡ ಹಾಗೂ ಕೂಡೂರು ಗ್ರಾಮ ಪಂಚಾಯತ್ ಆಡಳಿತ ಮಂಡಳಿಯವರೂ ಅದೇ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಪುರ ಗ್ರಾಮದಲ್ಲಿ ಅತಿ ಹೆಚ್ಚು ಅಪಘಾತಗಳು ನಡೆಯುವ ಹಾಗೂ ಅಪಾಯಕಾರಿ ತಿರುವುಗಳು ಪ್ರದೇಶಗಳನ್ನು ಗುರುತಿಸಿ ಅಲ್ಲಿ ಜಾಗೃತಿ ಸೂಚನಾ ನಾಮಫಲಕಗಳನ್ನು ಹಾಗೂ ಮರಗಳಿಗೆ ರೇಡಿಯಮ್ ರಿಫ್ಲೆಕ್ಟರ್ ಹಚ್ಚುವ ಮೂಲಕ ರಸ್ತೆ ಸುರಕ್ಷತೆ ಹಾಗೂ ಅಪಾಯಕಾರಿ ಸ್ಥಳಗಳು ಮತ್ತು ತಿರುಗಳ ಬಗ್ಗೆ ಸವಾರರಿಗೆ ಅರಿವನ್ನ ಮೂಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಈ  ಮೂಲಕ ಹೊರಗಿನಿಂದ ಬರುವ ಪ್ರವಾಸಿಗರಿಗೆ ಮತ್ತು ವಾಹನ ಚಾಲಕರಿಗೆ ಮುಂದಾಗುವ ಅಪಾಯವನ್ನು ತಪ್ಪಿಸಲು, ಸುಖಕರ ಪ್ರಯಾಣ ಮಾಡಲು ಮತ್ತು ಮುಂಜಾಗ್ರತೆ ವಹಿಸಲು ಸಹಕಾರಿಯಾಗುವಂತೆ ಸೂಚನಾ ಫಲಕ ಅಳವಡಿಸುವ ಕೆಲಸವನ್ನ ಪೋಲಿಸ ಇಲಾಖೆ ಮಾಡಿದೆ
ಪೊಲೀಸ್ ಇಲಾಖೆಗಳು ಕೇವಲ ಅಪರಾಧ ತಡೆ, ಕಾನೂನು ಪಾಲನೆ ಅಷ್ಟೇ ಅಲ್ಲದೆ ಇಂತಹ ಜನಪರ ಸಮಾಜಮುಖಿ ಕೆಲಸಗಳನ್ನ ಮಾಡಬಹುದು ಎನ್ನುವ ಮೂಲಕ ಜನರ ಪ್ರಶಂಸೆಗೆ ಪಾತ್ರರಾಗಿದೆ.
ಈ ಸಮಾಜಮುಖಿ ಕಾರ್ಯದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್, ವಿಕ್ಟರ್, ನಾಗೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಇನ್ನಿತರರು ಪಾಲ್ಗೊಂಡಿದ್ದರು.

NOTICE BOARD...


Discover more from Prasarana news

Subscribe to get the latest posts sent to your email.

  • Related Posts

    BYR:HOSANAGARA: ಸಂಸದರಿಂದ: ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಣೆ…

    ಹೊಸನಗರ:ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಯೋಜನೆಯಡಿ ಇಂದು  ಸರ್ಕಾರಿ ಶಾಲೆಯಲ್ಲಿ ಶಿಕ್ಷಣಾಭ್ಯಾಸ ಮಾಡುತ್ತಿರುವ ಪ್ರಾಥಮಿಕ ಶಾಲೆಯ 1 ರಿಂದ 4 ನೆ ತರಗತಿ ಮಕ್ಕಳಿಗೆ ಸ್ವಟರ್ ಅನ್ನು ಸಂಸದರಾದ ಬಿ ವೈ ರಾಘವೇಂದ್ರ ವಿತರಿಸಿದರು.ವಿತರಣೆ ಬಳಿಕ ಮಾತನಾಡಿದ ಅವರು…

    Read more

    RIPPONPET NEWS:ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ….

    ರಿಪ್ಪನ್‌ಪೇಟೆ ;-ಜುಲೈ 19 ರ ಶನಿವಾರ ಸಂಜೆ   ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.ಹಾಗೂ ಪದವಿ ಕಾಲೇಜ್‌ನಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಆಂಕಗಳಿಸಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ 2025-26 ನೇ ಸಾಲಿನ ನೂತನರೋಟರಿಕ್ಲಬ್ ಪದವಿ ಸ್ವೀಕಾರ…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading