
ಹೊಸನಗರ:ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಬೂತ್ ಸಮಿತಿಗೆ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಜಿಎನ್ ರಾಜೀನಾಮೆ ನೀಡಿದ್ದಾರೆ.
ತಮ್ಮ ರಾಜೀನಾಮೆ ಪತ್ರವನ್ನು ಹೊಸನಗರ ತಾಲ್ಲೂಕು ಬಿಜೆಪಿ ಕಛೇರಿಗೆ ತಲುಪಿಸಿದ್ದು ಅದರಲ್ಲಿ, 10 ವರ್ಷಗಳಿಂದ ಎಂ ಗುಡ್ಡೆಕೊಪ್ಪ ಗ್ರಾಮದ ಬೂತ್ ಸಂಖ್ಯಾ 251 ಬೂತ್ ಅಧ್ಯಕ್ಷನಾಗಿದ್ದು ನಮ್ಮ ಬಿಜೆಪಿ ಸರ್ಕಾರ ಇದ್ದಾಗಲೇ ನಮ್ಮ ಜಿಲ್ಲೆಯವರೇ ಆದಾ ಆರಗ ಜ್ಞಾನೇಂದ್ರರವರು ಗೃಹಮಂತ್ರಿಯಾಗಿದ್ದರೂ ನನ್ನ ಮೇಲೆ ಒಂದೇ ಒಂದು ದೂರು ಇಲ್ಲದಿದ್ದರೂ ನನಗೆ ರೌಡಿಶೀಟ್ ಹಾಕಿದ್ದು ಮತ್ತು ಬಿಜೆಪಿ ಹೊಸನಗರ ಮಂಡಲದ ಪ್ರಧಾನ ಕಾರ್ಯದರ್ಶಿಯವರು ಮತ್ತು ಕೆಲವು ಸದಸ್ಯರು ನನ್ನ ಮೇಲೆ ಸುಳ್ಳು ಆಪಾದನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಪೋಸ್ಟರ್ ಹಾಕಿದ್ದು ಇದನ್ನೆಲ್ಲ ಪಕ್ಷದ ತಾಲ್ಲೂಕು ಅಧ್ಯಕ್ಷರ ಹಾಗೂ ಮುಖಂಡರ ಗಮನಕ್ಕೆ ಹಲವು ಬಾರಿ ತಂದರೂ ನಿರ್ಲಕ್ಷ್ಯ ತೋರಿರುವುದರಿಂದ ನಾನು ಬೂತ್ ಅಧ್ಯಕ್ಷ ಸ್ಥಾನಕ್ಕೆ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ..
RESIGNATION...
Discover more from Prasarana news
Subscribe to get the latest posts sent to your email.
