ಆನಂದಪುರ: ಗೌತಮಪುರದ ತ್ಯಾಗರ್ತಿ ತಿರುವಿನಲ್ಲಿ ಶುಕ್ರವಾರ ಟಿವಿಎಸ್ ಎಕ್ಸೆಲ್ ಮತ್ತು ಅಶೋಕ್ ಲೇಲ್ಯಾಂಡ್ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳಂದೂರು ಗ್ರಾಮದ ವಾಸಪ್ಪ(70) ಹಾಗೂಇವರ ಅಳಿಯ ಹೊಸನಗರ ತಾಲೂಕಿನವಾರಂಬಳ್ಳಿ ಗ್ರಾಮದ ಸತೀಶ್(40)ಸಾವಿಗೀಡಾದವರು.
ಬೆಳಂದೂರು ಗ್ರಾಮದಿಂದ ಆನಂದಪುರದ ಕಡೆ ತೆರಳುತ್ತಿದ್ದ ಟಿವಿಎಸ್ ಎಕ್ಸೆಲ್ ಹಾಗೂ ಆನಂದಪುರದಿಂದ ತ್ಯಾಗರ್ತಿ ಕಡೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿಕ್ಕಿಯಾದ ರಭಸಕ್ಕೆ ಟಿವಿಎಸ್ ಎಕ್ಸೆಲ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.
ರಿಪ್ಪನ್ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತಿಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 58ನೇ ಗಣೇಶೋತ್ಸವದ ಅಧ್ಯಕ್ಷರಾಗಿ ಸುಧೀರ್ ಪಿ ಹಾಗೂ ಕಾರ್ಯದರ್ಶಿಯಾಗಿ ಮುರುಳಿ ಕೆರೆಹಳ್ಳಿ ಆಯ್ಕೆಯಾಗಿದ್ದಾರೆ. ಪಟ್ಟಣದ…
ರಿಪ್ಪನ್ ಪೇಟೆ: 21ನೇ ಶತಮಾನದಲ್ಲಿ ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯಗಳನ್ನು ಪರಿಶೀಲಿಸುತ್ತಾರೆ, ಉಪನ್ಯಾಸಕರುಗಳು ಸಮಯ ಪಾಲನೆ ಮತ್ತು ಶಿಸ್ತು ಅಳವಡಿಸಿಕೊಂಡರೆ …