ಆನಂದಪುರ: ಗೌತಮಪುರದ ತ್ಯಾಗರ್ತಿ ತಿರುವಿನಲ್ಲಿ ಶುಕ್ರವಾರ ಟಿವಿಎಸ್ ಎಕ್ಸೆಲ್ ಮತ್ತು ಅಶೋಕ್ ಲೇಲ್ಯಾಂಡ್ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳಂದೂರು ಗ್ರಾಮದ ವಾಸಪ್ಪ(70) ಹಾಗೂಇವರ ಅಳಿಯ ಹೊಸನಗರ ತಾಲೂಕಿನವಾರಂಬಳ್ಳಿ ಗ್ರಾಮದ ಸತೀಶ್(40)ಸಾವಿಗೀಡಾದವರು.
ಬೆಳಂದೂರು ಗ್ರಾಮದಿಂದ ಆನಂದಪುರದ ಕಡೆ ತೆರಳುತ್ತಿದ್ದ ಟಿವಿಎಸ್ ಎಕ್ಸೆಲ್ ಹಾಗೂ ಆನಂದಪುರದಿಂದ ತ್ಯಾಗರ್ತಿ ಕಡೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿಕ್ಕಿಯಾದ ರಭಸಕ್ಕೆ ಟಿವಿಎಸ್ ಎಕ್ಸೆಲ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.
ಹೊಸನಗರ: ಅಖಿಲ ಭಾರತ ಹಿಂದೂ ಮಹಾಸಭಾ ಹೊಸನಗರ ಘಟಕದ 7ನೇ ವರ್ಷದ ಅದ್ದೂರಿ ಗಣೇಶೋತ್ಸವಕ್ಕೆ ಬರದ ಸಿದ್ಧತೆ ನಡೆಸಲಾಗುತ್ತಿದ್ದು ಆಗಸ್ಟ್ 27-08-2025ರ ಬುಧವಾರದಿಂದ ಸೆಪ್ಟೆಂಬರ್ 10-08-2025ರ ಬುಧವಾರದ…
ಹೊಸನಗರ ;ತಾಲ್ಲೂಕಿನಾದ್ಯಂತ ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಜು 04-07-2025 ರ ಗುರುವಾರ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ…