HOSANAGARA- 71ನೇ ಸಹಕಾರಿ ಸಪ್ತಾಹ ಅಂಗವಾಗಿ ಸಹಕಾರಿಗಳಿಗೆ ಕ್ರೀಡಾಕೂಟ:ವಾಟಗೋಡು ಸುರೇಶ್


ಹೊಸನಗರ: ಮಾಜಿ ಪ್ರಧಾನಿ ದಿವಂಗತ ಜವಹರಲಾಲ್ ನೆಹರು ಅವರ ಜನ್ಮದಿನವಾದ ನವೆಂಬರ್ 14 ರಿಂದ 20ನೇ ತಾರೀಖಿನವರೆಗೆ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸಹಕಾರಿಗಳಿಗೆ ಜಿಲ್ಲಾದ್ಯಂತ ಕ್ರೀಡಾಕೂಟ ಆಯೋಜಿಸಿದ್ದು, ಸಹಕಾರಿ ಸಪ್ತಾಹವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆ ನಡೆದಿದೆ ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ವಾಟಗೋಡು ಸುರೇಶ್ ತಿಳಿಸಿದರು.

ಶನಿವಾರ ಪಟ್ಟಣದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ವಿವಿಧ ಸಹಕಾರಿ ಸಂಘಗಳ ಆಶ್ರಯದಲ್ಲಿ  ಸಂಘದ ಪದಾಧಿಕಾರಿಗಳಿಗಾಗಿ ಹಮ್ಮಿಕೊಂಡಿದ್ದ ಕ್ರೀಡಾಕೂಟಕ್ಕೆ ಚಾಲನೆ ನೀಡಿ  ಅವರು ಮಾತನಾಡಿದರು.



ದಶಕಗಳ ಬಳಿಕ ಇದೇ ಮೊದಲ ಬಾರಿಗೆ ಸಹಕಾರಿಗಳಿಗೆ ಸಹಕಾರಿ ಸಪ್ತಾಹ ಅಂಗವಾಗಿ  ಅಳಿವಿನಂಚಿನಲ್ಲಿರುವವಿವಿಧ ಗ್ರಾಮೀಣ ಕ್ರೀಡೆಗಳನ್ನು ಅಯೋಜಿಸುವ ಮೂಲಕ ಯುವಶಕ್ತಿ ಸಂಘಟನೆ ಹಾಗು ಯುವಕರಲ್ಲಿ  ಸಹಕಾರ ಚಳುವಳಿ ಕುರಿತು ಅರಿವು ಮೂಡಿಸುವುದು ಸಪ್ತಾಹದ ಮೂಲ ಉದ್ದೇಶವಾಗಿದೆ ಎಂದರು.

ವರ್ಷ ಪೂರ್ತಿ ವ್ಯವಹಾರಿಕ ಲೋಕದಲ್ಲಿ ಮುಳುಗುವ ಸಹಕಾರಿಗಳ ಮನೋಲ್ಲಸಕ್ಕಾಗಿ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ.
ಕೇವಲ ಬಹುಮಾನ ಕುರಿತಾಗಿ ಸಹಕಾರಿಗಳು ಕ್ರೀಡಾಕೂಟದಲ್ಲಿ ಭಾಗವಹಿಸದೆ, ಕ್ರೀಡಾಸ್ಪೂರ್ತಿಯಿಂದ ಭಾಗವಹಿಸುವಂತೆ ಅವರು ಸಲಹೆ ನೀಡಿದರು.  ಸಹಕಾರ ಚಳುವಳಿಯಲ್ಲಿ ಯುವಸಮೂಹ ಸಕ್ರಿಯವಾಗಿ ಭಾಗವಹಿಸಲು ಜಿಲ್ಲೆಯ ಪದವಿಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಘಗಳ ಪಾತ್ರ ಎಂಬ ವಿಷಯ ಕುರಿತಂತೆ ನವೆಂಬರ್ 11ರಂದು  ಚರ್ಚಾ ಸ್ಪರ್ಧೆಗೆ ಶಿವಮೊಗ್ಗದಲ್ಲಿ ಅವಕಾಶ ಕಲ್ಪಿಸಲಾಗಿದೆ. ನ.18ರಂದು ಜಿಲ್ಲಾಮಟ್ಟದ ಕಾರ್ಯಕ್ರಮದಲ್ಲಿ ವಿಜೇತರಿಗೆ ಸನ್ಮಾನ ದೊಂದಿಗೆ ಬಹುಮಾನ ವಿತರಣೆ ನಡೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ಕಳೂರು ಶ್ರೀ ರಾಮೇಶ್ವರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ದುಮ್ಮ ವಿನಯ್ ಕುಮಾರ್, ವೀರಶೈವ ಸಹಕಾರ ಸಂಘದ ಮಾಜಿ ಅಧ್ಯಕ್ಷ ನಂಜುಂಡಪ್ಪ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಗುರುಮೂರ್ತಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎಂ.ಪರಮೇಶ್, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಶಿವಕುಮಾರ್, ಶಿಮೊಲ್ ಕ್ಷೇತ್ರಾಧಿಕಾರಿ  ನವೀನ್ ಕುಮಾರ್. ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

HOSANAGARA.


Discover more from Prasarana news

Subscribe to get the latest posts sent to your email.

  • Related Posts

    DEER ACCIDENT:ಕಾರಿಗೆ ಡಿಕ್ಕಿ ಜಿಂಕೆ ಸಾವು…

    ಹೊಸನಗರ: ಪಟ್ಟಣ ಸಮೀಪ ಕಲ್ಲುಹಳ್ಳ ಬಳಿ ಬೈಂದೂರು ರಾಣಿಬೆನ್ನೂರು ರಾಷ್ಟ್ರೀಯ ಹೆದ್ದಾರಿ 766ಸಿ ಯಲ್ಲಿ ಚಲಿಸುತ್ತಿದ್ದ ಕಾರಿಗೆ  ಜಿಂಕೆಯೊಂದು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.ಹೊಸನಗರದಿಂದ ಹೋಗುತ್ತಿದ್ದ ಕಾರಿಗೆ ರಸ್ತೆ ಪಕ್ಕದಿಂದ ರಭಸದಲ್ಲಿ ಓಡಿ ಬಂದ ಜಿಂಕೆ ಡಿಕ್ಕಿ ಹೊಡೆದಿದ್ದು…

    Read more

    BRAHMESHWAR:ಏ.20 ರಂದು ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರೇಶ್ವರ ದೇವಸ್ಥಾನದ ನೂತನ ಶಿಲಾಮಯ ದೇಗುಲದ ಅಡಿಗಲ್ಲು ಸಮಾರಂಭ..

    ಹೊಸನಗರ: ಐತಿಹಾಸಿಕ ಹಿನ್ನೆಲೆಯ ಬ್ರಹ್ಮೇಶ್ವರದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ನೂತನ ಶಿಲಾಮಯ ಅಧಿಷ್ಠಾನ ಅಡಿಗಲ್ಲು ಸಮಾರಂಭ ನಾಳೆ ಬೆಳಿಗ್ಗೆ 10.30 ಕ್ಕೆ ಸಂಸದರಾದ ಬಿ ವೈ ರಾಘವೇಂದ್ರ ನೆರವೇರಿಸಲಿದ್ದಾರೆ ಎಂದು ಶ್ರೀ ವೀರಭದ್ರೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ಸುಧೀರ್…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading