HOSANAGARA NEWS: ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ.
ಹೊಸನಗರ ಮೂಲದ ವ್ಯಕ್ತಿ ಸೇರಿ ಇಬ್ಬರು ಸಾವು..

ಶಿವಮೊಗ್ಗ: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಗಾಜನೂರು ಅಗ್ರಹಾರದ ಬಳಿ ಇಂದು ಬೆಳಗಿನ ಜಾವ ಅಪಘಾತ ಸಂಭವಿಸಿದೆ.
ಖಾಸಗಿ ಬಸ್ಸಿನ ನಿರ್ವಾಹಕ ಹೊಸನಗರ ತಾಲೂಕಿನ ಕರೀನಗೊಳ್ಳಿ ವಾಸಿ ಅಣ್ಣಪ್ಪ ಮೃತರಾಗಿದ್ದಾರೆ. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಣಿಪಾಲದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ 13 ಜನ ಗಾಯಗೊಂಡಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆ ಸೇರಿ ವಿವಿಧೆಡೆ ದಾಖಲು ಮಾಡಲಾಗಿದೆ.ಉಮೇಶ್(50), ಪ್ರಸಾದ್(40), ವಿಷ್ಣು(21), ಮಂಜುನಾಥ್ (45), ಸುಜಾತಾ(40), ಅನಂದ್ ನಾಯ್ಕ್(50), ನೀಲಾಂಬಿಕಾ(45), ಪ್ರಸಾದ್ (43), ಬಿಂದು(20), ಶಶಾಂಕ್ (20), ಲಕ್ಷ್ಮೀ(35), ಶ್ರೀರಾಮುಲು(42) ಹಾಗೂ ಕಾರ್ತಿಕ್ (32) ಎಂಬುವರು ಗಾಯಗೊಂಡಿದ್ದಾರೆ.
ಖಾಸಗಿ ಬಸ್‌ ಮಂಗಳೂರಿನಿಂದ ಚಳ್ಳಕೆರೆಗೆ ತೆರಳುತಿತ್ತು ಎಂದು ತಿಳಿದು ಬಂದಿದೆ. ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬಸ್ಸು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ಸಿನ ಎಡ ಬದಿ ಸಂಪೂರ್ಣ ಹಾನಿಯಾಗಿದೆ. ಸೀಟುಗಳು ಕಿತ್ತು ಬಂದಿವೆ.
ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆಯಿಂದಾಗ ಈ ಭಾಗದಲ್ಲಿ ರಸ್ತೆ ಸಂಚಾಕ್ಕೆ ಅಡಚಣೆಯಾಗಿತ್ತು.

HOSANAGARA NEWS..


Discover more from Prasarana news

Subscribe to get the latest posts sent to your email.

  • Related Posts

    HOSANAGARA ACCIDENT: ನಗರ ದರ್ಗಾ ಅಪ್ ಬಳಿ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು….

    ಹೊಸನಗರ: ನಗರದಿಂದ ಹೊಸನಗರ ಮಾರ್ಗದ ದರ್ಗಾ ಅಪ್ ಬಳಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಬೈಕ ಸವಾರ  ಸಾಗರ ತಾಲೂಕಿನ ಹೊನ್ನೆಸರ ಗ್ರಾಮದ ಮೃತ ಅಶೋಕ (24) …

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading