SUTTA BRIDGE:ಹೊಸನಗರ ಪ್ರವಾಸೋದ್ಯಮ ಕೇಂದ್ರವಾಗಿ ರೂಪುಗೊಳ್ಳುತ್ತಿದೆ: ಬಿ ವೈ ಆರ್.

ಹೊಸನಗರ: ತಾಲೂಕು ಪ್ರವಾಸೋದ್ಯಮ ಕೇಂದ್ರವಾಗಿ ರೂಪುಗೊಳ್ಳುತ್ತಿದ್ದು ಇದಕ್ಕೆ ಪೂರಕವಾಗುವಂತಹ ಎಲ್ಲ ಕಾಮಗಾರಿಗಳು ಅತ್ಯಂತ ಬರದಿಂದ ಸಾಗುತ್ತಿದೆ ಎಂದು ಸಂಸದರಾದ ಬಿ ವೈ ರಾಘವೇಂದ್ರ ತಿಳಿಸಿದರು.
ಹೊಸನಗರ ಪಟ್ಟಣ ಸಮೀಪ ನಿರ್ಮಾಣ ಹಂತದ ಸುತ್ತ ಪರ್ಯಾಯ ಸೇತುವೆ ಹಾಗೂ ಬೇಕ್ಕೊಡಿ ಸೇತುವೆ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು ಬೈಂದೂರ್-ರಾಣಿಬೆನ್ನೂರು ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಸೇತುವೆ ಯಾದಂತಹ ಈ ಸುತ್ತ ಪರ್ಯಾಯ ಸೇತುವೆ ಕಾಮಗಾರಿ ಅತ್ಯಂತ ವೇಗವಾಗಿ ಸಾಗುತ್ತಿದೆ.
ಪಟ್ಟಣದ ಮಾವಿನಕೊಪ್ಪದಿಂದ ಅಡಗೋಡಿಯವರೆಗಿನ ರಸ್ತೆಯಲ್ಲಿ ಸುಮಾರು 122 ತಿರುಗುಗಳಿದ್ದು ಅದನ್ನು ನೇರ ರಸ್ತೆ ಯಾಗಿ ನಿರ್ಮಾಣ ಮಾಡುವ ಈ ಕಾಮಗಾರಿ ಇಂದ ಒಟ್ಟು ದೂರವಾದ 34 ಕಿಲೋಮೀಟರ್ ದೂರವನ್ನು ಕೇವಲ 13 ಕಿ ಮಿ ಗೆ ಇಳಿಕೆಯಾಗುತ್ತಿದೆ ಇದರಿಂದ ಕೇವಲ 15 ನಿಮಿಷಗಳಲ್ಲಿ ಹದಿಮೂರು ಕಿಲೋಮೀಟರ್ಗಳು ಸುಖಕರ ಪ್ರಯಾಣವನ್ನು ಪ್ರವಾಸಿಗರು ಮಾಡಬಹುದು ಎಂದರು.
ಒಟ್ಟು 320 ಕೋಟಿ ಅನುದಾನದಲ್ಲಿ ಈ ಒಂದುವರೆ ಕಿಲೋಮೀಟರ್ ಉದ್ದದ ಬದಲಿಸೇತುವೆ ನಿರ್ಮಾಣವಾಗುತ್ತಿದ್ದು ಬೇಕ್ಕೋಡಿ ಸೇತುವೆ ಕಾಮಗಾರಿಗೆ 200 ಕೋಟಿ ಅನುದಾನ ಬಿಡುಗಡೆಯಾಗಿ ಆ ಕಾಮಗಾರಿಯು ಸಹ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಈ ಭಾಗದ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ನಗರಕೋಟೆ, ದೇವಗಂಗೆ ಕೊಳ, ಜೈನಬಸದಿ, ಅಭಿವೃದ್ಧಿ ಹಾಗೂ ಕೊಡಚಾದ್ರಿ ಕೊಲ್ಲೂರು ನಡುವಿನ ಕೇಬಲ್ ಕರ್ ಸಂಪರ್ಕಕ್ಕೆ ಚಿಂತನೆ ನಡೆದಿದ್ದು ಶೀಘ್ರ ಅವುಗಳ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.
ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷರಾದ ಸುಬ್ರಮಣ್ಯ ಮತ್ತಿಮನ್ ಜಿಲ್ಲಾ ಒಬಿಸಿ ಮೋರ್ಚಾದ ಅಧ್ಯಕ್ಷರಾದ ಎಂ ಎನ್ ಸುಧಾಕರ್, ಬಿಜೆಪಿ ಜಿಲ್ಲಾ ನಿಕಟಪೂರ್ವ ಅಧ್ಯಕ್ಷರಾದ ಟಿ ಡಿ ಮೇಘರಾಜ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಸ್ವಾಮಿರಾಮ್, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ವೀರೇಶ್ ಅಲವಳ್ಳಿ. ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಲಗದ್ದೆ ಉಮೇಶ್, ಮುಖಂಡರಾದ ದೇವಾನಂದ್, ಗಣಪತಿ ಬೆಳಗೋಡು, ಕೆ ವಿ ಕೃಷ್ಣಮೂರ್ತಿ, ಮೋಹನ್ ಮಂಡಾನಿ ಮುಂತಾದವರು ಉಪಸ್ಥಿತರಿದ್ದರು.

SUTTA BRIDGE..


Discover more from Prasarana news

Subscribe to get the latest posts sent to your email.

  • Related Posts

    BANGALORE:ಕರ್ನಾಟಕ ಪಂಚಾಯತ್ ಐಕಾನ್ ಪುರಸ್ಕಾರಕ್ಕೆ ಭಾಜನರಾದ ಪ್ರವೀಣ್ ಜಿ.ಎನ್.

    ಹೊಸನಗರ: ಎಂ.ಗುಡೇಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪ್ರವೀಣ.ಜಿ.ಎನ್ ತಮ್ಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಗ್ರಾಮ, ವ್ಯಾಪ್ತಿಯಲ್ಲಿ ರಸ್ತೆ ಒಳಚರಂಡಿ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಿಕೆ ನರೇಗಾ, ಜಲಜೀವನ್ ಮಿಷನ್ ಗಳಂತಹ ಹಲವಾರು…

    Read more

    U T KHADAR:ತಾಳ್ಮೆ ಪ್ರತಿಯೊಬ್ಬರ ಯಶಸ್ಸಿನ ಮೂಲ… ಸೌಹಾರ್ದ ಸಂಗಮ ಸಮಾವೇಶದಲ್ಲಿ ಯು.ಟಿ.ಖಾದರ್  ಕಿವಿ ಮಾತು..

    ಹೊಸನಗರ; ತಾಳ್ಮೆ ಪ್ರತಿಯೊಬ್ಬರ ಯಶಸ್ಸಿನ ಮೂಲ ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ತಿಳಿಸಿದರು.ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಹಿಯುದ್ದೀನ್ ಜುಮ್ಮ ಮಸೀದಿ ಆವರಣದಲ್ಲಿ ಎಸ್‌ಎಸ್‌ಎಫ್, ಎಸ್‌ವೈಎಸ್ ಹಾಗೂ ಎಮ್‌ಜೆಎಮ್ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಸೌಹಾರ್ದ ಸಂಗಮ…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading